Archive for September, 2008

ಸೂರ್ಯ ಭೂಮಿಯ ಸುತ್ತ ಸುತ್ತುತ್ತಾನಾ ಬಿಶಪ್?

Sunday, September 28th, 2008

City of God.
ಜೆರುಸಲೇಂ ಅನ್ನು ಕ್ರೈಸ್ತರು ಕರೆಯುವುದೇ ಹಾಗೆ. ಅವರ ಆರಾಧ್ಯದೈವ ಜೀಸಸ್ ಜನಿಸಿದ್ದು ಜೆರುಸಲೇಂ ಬಳಿಯ ಬೆತ್ಲಹೇಮ್‌ನಲ್ಲಿ. ಬಾಲ್ಯವನ್ನು ಕಳೆದಿದ್ದು ಜೆರುಸಲೇಂನಲ್ಲಿ. ಜೀಸಸ್‌ನನ್ನು ಶಿಲುಬೆಗೆ ಏರಿಸಿದ ಕ್ಯಾಲ್‌ವರಿ ಹಿಲ್ ಇರುವುದೂ ಜೇರುಸಲೇಂನಲ್ಲೇ. ಈ ಎಲ್ಲ ಕಾರಣ ಗಳಿಂದಾಗಿ ಕ್ರೈಸ್ತರಿಗೆ ಜೆರುಸಲೇಂಗಿಂತ ಪವಿತ್ರ ಸ್ಥಳ ಜಗತ್ತಿನಲ್ಲಿ ಬೇರೊಂದಿಲ್ಲ. ಇಂತಹ ಜೇರುಸಲೇಂ 1076ರಲ್ಲಿ ಮುಸ್ಲಿಮರ ವಶವಾಯಿತು.

ಹಾಗಂತ ಹೇಳಿದವನು ಯಾವ ಬಜರಂಗಿಯೂ ಅಲ್ಲ !

Sunday, September 21st, 2008

ಒಬ್ಬ ಕ್ಯಾಥೋಲಿಕ್ಕನಾಗಿ ನಾನು ಪೂರ್ವಗ್ರಹಪೀಡಿತನಾಗಿದ್ದೆ. ನನ್ನ ಅಂಕಲ್ ಅಂದು ಹಾಗೂ ಇಂದಿಗೂ ಒಬ್ಬ ಮಿಷನರಿ. ಒಂದು ವೇಳೆ ದಕ್ಷಿಣ ಅಮೆರಿಕದ ಜನರನ್ನು ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡದೇ ಹೋದರೆ ಅವರು ಅನಂತ ಅನಾಹುತಕ್ಕೆ ಈಡಾಗುತ್ತಾರೆ ಎಂದು ಆತ ಅಲ್ಲಿಗೆ ತೆರಳಿದ. ನಾನು ಕ್ಯಾಥೋಲಿಕ್ ಶಾಲೆಯಲ್ಲಿ ಕಲಿತವನು. ಹಿಂದೂಯಿಸಂ ಎಂದರೆ ಬಹುದೇವತಾರಾಧನೆ, ಮೂರ್ತಿಪೂಜೆ ಮತ್ತು ಮೂಢನಂಬಿಕೆ. ಹಿಂದೂಗಳಿಗೆ ಸ್ವರ್ಗದಲ್ಲಿ ಯಾವುದೇ ಜಾಗವಿಲ್ಲ ಎಂದು ನನಗೆ ಹೇಳಿಕೊಡಲಾಯಿತು. ನನ್ನ ಬಾಲ್ಯದ ಕ್ಯಾಥೋಲಿಸಂ ಅಂದರೆ ಇದಾಗಿತ್ತು, ಇಂದಿಗೂ ಹಿಂದೂಧರ್ಮವನ್ನು ಅವಹೇಳನ ಮಾಡುವ [...]

ಮಮತಾ ಮೇಲೆ ನಮಗೇಕಿರಬೇಕು ಮಮತೆ?

Monday, September 15th, 2008

ಅಂಥದ್ದೊಂದು ಕಾರನ್ನು ಮಾಡಲು ಸಾಧ್ಯವೇ ಇಲ್ಲ. ಒಂದು ಲಕ್ಷಕ್ಕೆ ಕಾರು ತಯಾರು ಮಾಡಲು  ಖಂಡಿತ ಆಗದು ಅಂತ ನಮ್ಮ ಇಂಜಿನಿಯರ್‌ಗಳೂ ಹೇಳಿದ್ದಾರೆ ಎಂದಿದ್ದರು ಸುಝುಕಿ ಕಂಪನಿಯ ಮುಖ್ಯಸ್ಥ ಶಿನ್ಝೋ ನಕಾನಿಶಿ. ಆದರೆ ಜನವರಿ ೧೦ರಂದು ಜಗತ್ತೇ ನಿಬ್ಬೆರಗಾಗುವಂತೆ ಮಾಡಿದರು ಟಾಟಾ ಕಂಪನಿಯ ಮುಖ್ಯಸ್ಥ ರತನ್ ಟಾಟಾ. ಅಂದು ರಾಜಧಾನಿ ದಿಲ್ಲಿಯಲ್ಲಿ ನಡೆಯುತ್ತಿದ್ದ ಕಾರು ಪ್ರದರ್ಶನದ ವೇಳೆ ವಿಶ್ವದ ಅತ್ಯಂತ ಅಗ್ಗದ ಕಾರಿನ ಮುಖಪರಿಚಯ ಮಾಡಿದ ರತನ್ ಟಾಟಾ, “ಈ ಕಾರಿಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಬುದ್ಧದೇವ ಭಟ್ಟಾಚಾರ್ಯ [...]

ನಮಗೆ ಬೇಕಿರುವುದು ಪಿಳ್ಳಂಗೋವಿ ಕೃಷ್ಣನಲ್ಲ!

Wednesday, September 10th, 2008

೨೦೦೫ರಲ್ಲಿ ಸಾಯುವಾಗ ಪೋಪ್ ಜಾನ್‌ಪಾಲ್ ಮನದಲ್ಲಿ ಒಂದು ಕೊರಗು ಹಾಗೇ ಉಳಿದಿತ್ತು.
೧೯೭೯ರಲ್ಲಿ ಟರ್ಕಿ, ೧೯೮೧ರಲ್ಲಿ ಪಾಕಿಸ್ತಾನ, ಜಪಾನ್, ೧೯೮೧ ಹಾಗೂ ೧೯೯೫ರಲ್ಲಿ ಫಿಲಿಪ್ಪೀನ್ಸ್, ೧೯೮೪ ಮತ್ತು ೧೯೮೯ರಲ್ಲಿ ದಕ್ಷಿಣ ಕೊರಿಯಾ, ೧೯೮೪ರಲ್ಲಿ ಥಾಯ್ಲೆಂಡ್, ೧೯೮೬ರಲ್ಲಿ ಬಾಂಗ್ಲಾದೇಶ, ಸಿಂಗಪುರ, ೧೯೮೬ ಮತ್ತು ೧೯೯೯ರಲ್ಲಿ ಭಾರತ, ೧೯೮೯ರಲ್ಲಿ ಇಂಡೋನೇಷಿಯಾ ಮತ್ತು ಈಸ್ಟ್ ಟಿಮೋರ್, ೧೯೯೫ರಲ್ಲಿ ಶ್ರೀಲಂಕಾ, ೧೯೯೭ರಲ್ಲಿ ಲೆಬನಾನ್, ೨೦೦೧ರಲ್ಲಿ ಕಝಕಸ್ತಾನ್, ೨೦೦೨ರಲ್ಲಿ ಅಝರ್ ಬೈಜಾನ್- ಹೀಗೆ ೨೬ ವರ್ಷಗಳ ತಮ್ಮ ಪೋಪ್‌ಗಿರಿಯಲ್ಲಿ ಜಾನ್‌ಪಾಲ್ ಏಷ್ಯಾದ ೧೫ ರಾಷ್ಟ್ರಗಳಿಗೆ ಭೇಟಿ [...]

ಆ ಕೊಳಕನ ನೆನಪುಗಳು ಹೃದಯವನೇಕೆ ಕಲಕುತಿವೆ?

Tuesday, September 2nd, 2008

ಅವನೊಬ್ಬ ಅರ್ಧ ವಯಸ್ಸು ಮೀರಿದ ವ್ಯಕ್ತಿ.
ಅಗಲವಾದ ಕರಿ ಕನ್ನಡಕ ಆತನ ಕಣ್ಣುಗಳಿಗೆ ಪರದೆ ಹಾಕಿದೆ. ಕೆಂಪು ಬಣ್ಣದ ಬೇಸ್‌ಬಾಲ್ ಕ್ಯಾಪ್ ಮುಖದ ಅರ್ಧ ಭಾಗವನ್ನು ಆವರಿಸಿದೆ. ಆದರೂ ಪ್ಲಾಸ್ಟಿಕ್ ಸರ್ಜರಿಯ ಗುರುತು ಹಾಗೆಯೇ ಕಾಣುತ್ತಿದೆ. ಚರ್ಮ ಸುಕ್ಕುಗಟ್ಟಿದೆ, ನೋಟ ಕಳೆಗುಂದಿದೆ, ಕೈ ಬೆರಳಿನ ಉಗುರುಗಳು ಹಳದಿ ಮಿಶ್ರಿತ ಬಣ್ಣಕ್ಕೆ ತಿರುಗಿವೆ. ಆತ ಪೈಜಾಮ ಹಾಕಿಕೊಂಡಿದ್ದಾನೆ. ವ್ಹೀಲ್ ಚೇರ್ ಮೇಲೆ ಕುಳಿತಿದ್ದಾನೆ. ಆ ವ್ಹೀಲ್ ಚೇರನ್ನು ಆತನ ಸಹಾಯಕ ರಸ್ತೆ ಬದಿಯಲ್ಲಿ ತಳ್ಳಿಕೊಂಡು ಹೋಗುತ್ತಿದ್ದಾನೆ. ಅದರ ಮುಂದೆ ಮೂವರು [...]