ಹೆತ್ತು-ಹೊತ್ತವರಿಗೆ ಕೊಡುವ ಬಳುವಳಿ ಇದೇನಾ?
Sunday, January 31st, 2010
ಅಮ್ಮಾ ನಿನ್ನ ಎದೆಯಾಳದಲಿ ಗಾಳಕ್ಕೆ ಸಿಕ್ಕ ಮೀನು ಮಿಡುಕಾಡುತಿರುವೆ ನಾನು ಕಡಿಯಲೊಲ್ಲೆ ನೀ ಕರುಳ ಬಳ್ಳಿ- ಒಲವೂಡುತ್ತಿರುವ ತಾಯೆ ಬಿಡದ ಬುವಿಯ ಮಾಯೆ… ಆ ತಾಯಿಯ ಮಮತೆಯನ್ನು ಖ್ಯಾತ ಕವಿ ಬಿ.ಆರ್. ಲಕ್ಷ್ಮಣ್ರಾವ್ ತಮ್ಮ ಕವಿತೆಯೊಂದರಲ್ಲಿ ಈ ರೀತಿ ಹಿಡಿದಿಟ್ಟಿದ್ದಾರೆ. ಅಮ್ಮಾ… ಅದು ಹೆಣ್ಣಿರಲಿ, ಗಂಡಾಗಿರಲಿ, ಒಂದು ಮಗು ಜಾರಿ ಬಿದ್ದಾಗ ಅಥವಾ ಎಡವಿ ಮುಗ್ಗರಿಸಿದಾಗ, ನೆಲಕ್ಕುರುಳುವಾಗ ಬಾಯಲ್ಲಿ ಬರುವ ಮೊದಲನೇ ಕೂಗು ಇದೆಯಲ್ಲಾ ಅದೇ ‘ಅಮ್ಮಾ…’. ಅದಕ್ಕೇ ಕವಿ ಎನ್.ಎಸ್. ಲಕ್ಷ್ಮಿನಾರಾಯಣ ಭಟ್ಟರು ‘ಅಮ್ಮ ಎಂಬ [...]













