Archive for June, 2010

ಶ್ರದ್ಧೆಯ ತಾಯಂದಿರೇ, ತತ್ತ್ವಾದರ್ಶದ ‘ಶ್ರಾದ್ಧ’ ನೋಡಿ ಸುಮ್ಮನಿರೋದಾ?

Monday, June 28th, 2010
ಶ್ರದ್ಧೆಯ ತಾಯಂದಿರೇ, ತತ್ತ್ವಾದರ್ಶದ ‘ಶ್ರಾದ್ಧ’ ನೋಡಿ ಸುಮ್ಮನಿರೋದಾ?

ಅಂದು ನಡುರಾತ್ರಿ ಕಳೆದು 2 ಗಂಟೆಯಾಗಿದೆ. ಆ ಹೊತ್ತಿ ನಲ್ಲಿ ಮೊಬೈಲ್ ರಿಂಗ್ ಆಗುತ್ತಿದೆ. ಅತ್ತ ಕಡೆ ಹೆಣ್ಣು ಧ್ವನಿಯೊಂದು ಗದ್ಗದಿತವಾಗಿ ಕೇಳುತ್ತಿದೆ. ತನ್ನ 8 ತಿಂಗಳ ಕಂದಮ್ಮನ ಜೀವ ಉಳಿಸಿಕೊಳ್ಳಲು ಹೆಣಗಾಡುತ್ತಿದ್ದ ಅಮ್ಮನ ಧ್ವನಿ ಯದು. “ನೀವು ಹೇಳಿ ಸಾರ್, ಅವರು ನಿಮ್ಮ ಮಾತನ್ನು ಕೇಳುತ್ತಾರೆ” ಎಂದು ಅಂಗಲಾಚುತ್ತಿದ್ದಾಳೆ. ಅನಾರೋಗ್ಯದಿಂದ ಮಗು ನರಳುತ್ತಿ ದ್ದರೂ ಬಳ್ಳಾರಿ ಸರಕಾರಿ ಆಸ್ಪತ್ರೆಯ ವೈದ್ಯರು ಚಿಕಿತ್ಸೆ ಕೊಡಲು ಮುಂದಾಗುತ್ತಿಲ್ಲ.
ಆಗ ಆಕೆಗೆ ಕಂಡ ಕಡೆಯ ಆಶಾಕಿರಣ ಯಾವುದೆಂದು ತಿಳಿದಿದ್ದೀರಿ? ಆ ಹೊತ್ತಿನಲ್ಲಿ [...]

ಹದಿನಾರು ಪರ್ಸೆಂಟ್‌ಗೇ ಇಷ್ಟು ಹೆದರುವುದಾದರೆ…?

Friday, June 25th, 2010
ಹದಿನಾರು ಪರ್ಸೆಂಟ್‌ಗೇ ಇಷ್ಟು ಹೆದರುವುದಾದರೆ…?

ಬಿಹಾರ ವಿಧಾನಸಭೆಯ ಒಟ್ಟು ಸದಸ್ಯ ಬಲ 243. ಅದರಲ್ಲಿ ಎನ್‌ಡಿಎ ಬಲಾಬಲ 143. ಎನ್‌ಡಿಎ ಅನ್ನು ಒಡೆದು ನೋಡಿದರೆ ಜೆಡಿಯು ಪಾಲು 88 ಹಾಗೂ ಬಿಜೆಪಿ ಸಂಖ್ಯೆ 55. 2005ರ ವಿಧಾನಸಭೆ ಚುನಾವಣೆಯಲ್ಲಿ ಮೂರನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಲಾಲು ಪ್ರಸಾದ್ ಯಾದವ್ ಅವರ ಆರ್‌ಜೆಡಿ ಬಳಿ 54 ಶಾಸಕರಿದ್ದರೆ, ರಾಮ್ ವಿಲಾಸ್ ಪಾಸ್ವಾನ್ ಅವರ ಲೋಕತಾಂತ್ರಿಕ ಜನತಾ ಪಾರ್ಟಿಗೆ ಸಿಕ್ಕಿದ್ದು ಕೇವಲ 10 ಸೀಟುಗಳು!  ಲಾಲು ಹಾಗೂ ಪಾಸ್ವಾನ್ ಅವರಂತೂ ನಿತೀಶ್ ಕುಮಾರ್ ಅವರ ಬದ್ಧವೈರಿಗಳು. [...]

ಅನಂತಮೂರ್ತಿಯವರೇ, ಮಾವೋ ಏನು ಮಹಾತ್ಮ ಗಾಂಧಿಯೇ?

Sunday, June 13th, 2010
ಅನಂತಮೂರ್ತಿಯವರೇ, ಮಾವೋ ಏನು ಮಹಾತ್ಮ ಗಾಂಧಿಯೇ?

ಮಾವೋಯಿಸಂ ಅಂದರೆ ಏನು?
ಇಂಥದ್ದೊಂದು ‘ಇಸಂ’ ಹುಟ್ಟಿಕೊಂಡಿದ್ದಾದರೂ ಹೇಗೆ? ಹಾಗೂ ಏಕೆ? ಅದು ಜನ್ಮತಳೆಯುವುದಕ್ಕೂ ಮುನ್ನ ಜರುಗಿದ ಘಟನೆಗಳಾದರೂ ಯಾವುವು? ಅದು ಬೆಳೆದು ಬಂದ ರೀತಿಯನ್ನು ನೋಡಿದರೆ, ಅದರ ಪರಂಪರೆಯನ್ನು ಗಮನಿಸಿ ದರೆ ಮುಂದೆ ಎಂತಹ ಪರಿಸ್ಥಿತಿ ಸೃಷ್ಟಿಯಾಗಬಹುದು? ಇತ್ತೀಚಿನ ವರ್ಷಗಳಲ್ಲಿ ಭಾರತದಲ್ಲಿ ಪ್ರಮುಖವಾಗಿ ಕೇಳಿ ಬರುತ್ತಿರುವ ನಕ್ಸಲಿಸಂನ(ಹಿಂಸೆ) ಇನ್ನೊಂದು ಹೆಸರಾಗಿರುವ ಮಾವೋಯಿಸಂನ ಅಗತ್ಯ ನಿಜಕ್ಕೂ ನಮ್ಮ ದೇಶಕ್ಕಿದೆಯೇ? ಮಾವೋಯಿಸಂ ಎಂಬುದು ಯಾವ ವ್ಯಕ್ತಿಯ ಹೆಸರನ್ನು ಹೊಂದಿದೆ? ಅದು ಯಾವ ವ್ಯಕ್ತಿಯಿಂದ ಪ್ರೇರಣೆ ಪಡೆಯುತ್ತಿದೆ? ಮಾವೋ ಝೆಡಾಂಗ್ ಯಾರು? [...]

ಎಲ್ಲಿಯ ಅರಸು, ಎಲ್ಲಿಯ ಯಡಿಯೂರಪ್ಪ, ಹೇಳಿ ಈಶ್ವರಪ್ಪ?

Sunday, June 6th, 2010
ಎಲ್ಲಿಯ ಅರಸು, ಎಲ್ಲಿಯ ಯಡಿಯೂರಪ್ಪ, ಹೇಳಿ ಈಶ್ವರಪ್ಪ?

ಕಳೆದ ವರ್ಷ ಇದೇ ಜೂನ್ ವೇಳೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಆಗಿನ ಇಂಧನ ಖಾತೆ ಸಚಿವ ಕೆ.ಎಸ್. ಈಶ್ವರಪ್ಪ ಯಾವ ರೀತಿ ಬೀದಿಯಲ್ಲಿ ನಿಂತು ಜಗಳವಾಡಿಕೊಳ್ಳುತ್ತಿದ್ದರು ಎಂಬುದನ್ನು ನೆನಪಿಸಿಕೊಳ್ಳಿ. 2009, ಏಪ್ರಿಲ್‌ನಲ್ಲಿ ಲೋಕಸಭೆ ಚುನಾವಣೆ ಮುಗಿದು ಮೇನಲ್ಲಿ ಫಲಿತಾಂಶ ಹೊರಬಿದ್ದಿತ್ತು. ಯಡಿಯೂರಪ್ಪನವರ ಪುತ್ರ ರಾಘವೇಂದ್ರ ಶಿವಮೊಗ್ಗ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಅಲ್ಲಿಗೆ ಇಡೀ ಜಿಲ್ಲೆ ಅಪ್ಪ-ಮಗನ ನಿಯಂತ್ರಣಕ್ಕೆ ಒಳಪಟ್ಟಂತಾಯಿತು. ಇತ್ತ ಇಂಧನ ಖಾತೆ ಕೊಟ್ಟಿದ್ದರೂ ಅದನ್ನು ಸ್ವತಂತ್ರವಾಗಿ ‘ಡೀಲ್’ ಮಾಡಲು ಯಡಿಯೂರಪ್ಪನವರು ಅವಕಾಶ ಕೊಡುತ್ತಿಲ್ಲ ಎಂದು ಈಶ್ವರಪ್ಪನವರಿಗೆ [...]