*/
Date : 30-08-2010 | 30 Comments. | Read More
I want my country back! ಹಾಗಂತ ಈ ದೇಶದ ಹೆಮ್ಮೆಯ ಪುತ್ರನೇ ಹೇಳಬೇಕಾದ ಪರಿಸ್ಥಿತಿ ನಿರ್ಮಾಣವಾಯಿತೆ? ಈ ದೇಶಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ತಂದುಕೊಟ್ಟ ಚೆಸ್ ತಾರೆ, ತಾನು ಯಾವ ದೇಶದ ಪ್ರಜೆ ಎಂದು ಸಾಬೀತುಪಡಿಸಬೇಕಾದ ಸನ್ನಿವೇಶ ಸೃಷ್ಟಿಯಾಯಿತೆ? ಏನಾಗಿದೆ ಕಾಂಗ್ರೆಸ್ ನೇತೃತ್ವದ ಈ ಕೇಂದ್ರ ಸರಕಾರಕ್ಕೆ? ಒಂದು ಕಡೆ ಕಾಮನ್ವೆಲ್ತ್ ಗೇಮ್ಸ್ನಲ್ಲಿ ಭ್ರಷ್ಟಾಚಾರವೆಸಗುವ ಮೂಲಕ, ಕಳಪೆ ಕಾಮಗಾರಿಯ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಕಳಂಕ ತರುತ್ತಿದೆ. ಇನ್ನೊಂದೆಡೆ ಭಾರತಕ್ಕೆ ವಿಶ್ವಮನ್ನಣೆ ಗಳಿಸಿಕೊಟ್ಟಿರುವ ಕ್ರೀಡಾತಾರೆಯಾದ ವಿಶ್ವನಾಥನ್ […]
Date : 22-08-2010 | 24 Comments. | Read More
Yellow Journalism. ಹಾಗೆಂದು ಕೂಡಲೇ ತಟ್ಟನೆ ನೆನಪಾಗುವುದು ವಿಲಿಯಂ ರ್ಯಾಂಡಾಲ್ಫ್ ಹರ್ಸ್ಟ್. ‘ದಿ ಸ್ಯಾನ್ ಫ್ರಾನ್ಸಿಸ್ಕೋ ಎಕ್ಷಾಮಿನರ್’ ಎಂಬ ಪತ್ರಿಕೆಯನ್ನು ಅಪ್ಪನಿಂದ ಪಡೆದುಕೊಂಡ ಹರ್ಸ್ಟ್, 1897ರಲ್ಲಿ ಅಧಿಕೃತವಾಗಿ ಮುದ್ರಣ ಕ್ಷೇತ್ರಕ್ಕೆ ಕಾಲಿಟ್ಟ. ಅದರ ಬೆನ್ನಲ್ಲೇ ‘ದಿ ನ್ಯೂಯಾರ್ಕ್ ಜರ್ನಲ್’ ಎಂಬ ಮತ್ತೊಂದು ಪತ್ರಿಕೆಯನ್ನು ಖರೀದಿ ಮಾಡಿದ. ಈ ‘ದಿ ನ್ಯೂಯಾರ್ಕ್ ಜರ್ನಲ್’ಗೂ ಹಾಗೂ ಜೋಸೆಫ್ ಪುಲಿಟ್ಝರ್ನ ‘ನ್ಯೂಯಾರ್ಕ್ ವರ್ಲ್ಡ್’ ಪತ್ರಿಕೆಗೂ ತೀವ್ರ ಸೆಣಸಾಟ ಆರಂಭವಾಯಿತು. ಪ್ರಸಾರ ಸಂಖ್ಯೆಯಲ್ಲಿ ಮೇಲುಗೈ ಸಾಧಿಸುವ ಸಲುವಾಗಿ ಪತ್ರಿಕೋದ್ಯಮದ ಮೂಲತತ್ತ್ವಗಳನ್ನೇ ಗಾಳಿಗೆ ತೂರಲಾ […]
Date : 15-08-2010 | 20 Comments. | Read More
ಲಾ ಇಲಾಹ ಇಲ್ಲಲ್ಲಾಹು ಮುಹಮ್ಮದುರ್ ರಸೂಲುಲ್ಲ್ಲಾಹ್… ಅವನ ತುಟಿಗಳು ಕಂಪಿಸಿದ್ದು ಅದೇ ಕಡೇ ಸಲ. ಅಲ್ಲಾಹುವಿಗೆ ಕೊನೆಯ ಪ್ರಾರ್ಥನೆಯನ್ನು ಸಲ್ಲಿಸಿ, ಕಣ್ಣು ತೆರೆದ. ಅಷ್ಟರೊಳಗೆ ಮುಖದ ಸುತ್ತ ಕಪ್ಪು ಚೀಲ ಆವರಿಸಿತ್ತು. ಕುಣಿಕೆ ಶಿರವನ್ನು ಸುತ್ತಿತ್ತು. ಕಾಲ ಕೆಳಗಿನ ಹಲಗೆ ಸರಿಯಿತು. ಶರೀರ ಬಾವಿಯೊಳಕ್ಕೆ ಧುಮುಕಿತು. ಹಗ್ಗ ಬಿಗಿಯಿತು, ಉಸಿರು ನಿಂತಿತು. ಅಲ್ಲಿಗೆ ಆಶ್ಫಾಕುಲ್ಲಾ ಖಾನ್ ಎಂಬ ಕ್ರಾಂತಿಕಾರಿಯ ವಿರೋಚಿತ ಹೋರಾಟ ಅಂತ್ಯವಾಯಿತು. ಎಲ್ಲರೂ ಒಂದಲ್ಲ ಒಂದು ದಿನ ಈ ಬುವಿಯನ್ನು ಬಿಟ್ಟುಹೋಗಲೇ ಬೇಕು. ಸಾವು ಅನಿವಾರ್ಯ. […]
Date : 09-08-2010 | 26 Comments. | Read More
2008ರ ಒಲಿಂಪಿಕ್ಸ್ ನಡೆದಿದ್ದು ಚೀನಾದ ಬೀಜಿಂಗ್ನಲ್ಲಿ. 2012ರ ಒಲಿಂಪಿಕ್ಸ್ ನಡೆಯುವುದು ಇಂಗ್ಲೆಂಡ್ನ ಲಂಡನ್ನಲ್ಲಿ. 2016ರ ಒಲಿಂಪಿಕ್ಸ್ ಬ್ರೆಝಿಲ್ನ ರಯೋ ಡಿ ಜನೈರೋದಲ್ಲಿ ನಡೆಯಲಿದೆ. 2020ರ ಒಲಿಂಪಿಕ್ಸ್ ಎಲ್ಲಿ ನಡೆಯಲಿದೆ ಎಂಬುದು ಲಂಡನ್ ಒಲಿಂಪಿಕ್ಸ್ ವೇಳೆಗೆ ಅಖೈರಾಗಲಿದೆ. 2024 ಹಾಗೂ 2028ರ ಒಲಿಂಪಿಕ್ಸ್ ಅನ್ನು ಆಯೋಜಿಸಲು ಜಗತ್ತಿನ ಹತ್ತಾರು ದೇಶಗಳು ನಾ ಮುಂದು, ತಾ ಮುಂದು ಎಂಬಂತೆ ಧಾವಿಸುತ್ತಿವೆ. ಅದಕ್ಕಾಗಿ ಬಿಡ್ಡಿಂಗ್ ಕೂಡ ಆರಂಭವಾಗಿದೆ. ಅಧಿಕೃತವಾಗಿ ಘೋಷಣೆ ಮಾಡುವುದು 8 ವರ್ಷ ಮೊದಲಾದರೂ ಅಂತಾರಾಷ್ಟ್ರೀಯ ಕ್ರೀಡಾಕೂಟಗಳು ಕನಿಷ್ಠ 12 […]
Date : 03-08-2010 | 24 Comments. | Read More
Alas! 1931ರಲ್ಲಿ ಭಗತ್ ಸಿಂಗ್ನನ್ನು ನೇಣಿಗೆ ಹಾಕಿದಾಗಲೂ, 1945ರಲ್ಲಿ ಸುಭಾಷ್ಚಂದ್ರ ಬೋಸ್ ಅನುಮಾ ನಾಸ್ಪದವಾಗಿ ಸಾವಿಗೀಡಾದಾಗಲೂ, 1948ರಲ್ಲಿ ಗಾಂಧೀಜಿ ಹತ್ಯೆಯಾದಾಗಲೂ, 1975ರಲ್ಲಿ ತುರ್ತುಪರಿಸ್ಥಿತಿಯನ್ನು ಹೇರಿದಾ ಗಲೂ ನಮ್ಮ ಮಾಧ್ಯಮಗಳು ಈ ಪರಿ ಬೊಬ್ಬೆಹಾಕಿರಲಿಲ್ಲ! ಇತ್ತ ದಿಲ್ಲಿಯ ಬೀದಿ ಬೀದಿಗಳಲ್ಲಿ ೩ ಸಾವಿರ ಸಿಖ್ಖರನ್ನು ಹತ್ಯೆ ಮಾಡಿದ, ಅದನ್ನು ಒಂದು ದೊಡ್ಡಮರ ಉರುಳಿದಾಗ ಭೂಮಿ ಅಲು ಗುವುದು ಸಹಜ ಎಂದು ಲಜ್ಜೆಯಿಲ್ಲದೆ ಸಮರ್ಥಿಸಿಕೊಂಡಿದ್ದ ರಾಜೀವ್ ಗಾಂಧಿಯವರ ಕಾಂಗ್ರೆಸ್ ಪಕ್ಷ, ಒಬ್ಬ ಸೊಹ್ರಾಬುದ್ದೀನ್ಹತ್ಯೆಗೆ ಈಗ ಪ್ರತಿಕ್ರಿಯಿಸುತ್ತಿರುವ ರೀತಿಯಾದರೂ ಹೇಗಿದೆ? ಮೂರು […]