*/
Date : 31-10-2010 | 45 Comments. | Read More
ನೂರೈವತ್ತು ವರ್ಷಗಳ ಕಾಲ ಬ್ರಿಟಿಷರ ನಿಯಂತ್ರಣ ದಲ್ಲಿದ್ದ ಹಾಂಕಾಂಗ್ 1997ರಲ್ಲಿ ಚೀನಾದ ಪಾಲಾಯಿತು. 442 ವರ್ಷಗಳ ಕಾಲ ಮಕಾವು ಅನ್ನು ಆಳಿದ ಪೋರ್ಚುಗೀಸರು 1999ರಲ್ಲಿ ತುಟಿಪಿಟಿಕ್ ಅನ್ನದೆ ಚೀನಾದ ವಶಕ್ಕೆ ನೀಡಿ ಕಾಲ್ಕಿತ್ತರು. ಇನ್ನು ರಾಜಕೀಯವಾಗಿ ಪ್ರತ್ಯೇಕಗೊಂಡಿದ್ದರೂ ತೈವಾನ್ನಲ್ಲಿ ಇಂದಿಗೂ ನಡೆಯುವುದು ಚೀನಾದ್ದೇ ದರ್ಬಾರು. ಕಳೆದ 2 ಸಾವಿರ ವರ್ಷಗಳಲ್ಲಿ ಚೀನಾವನ್ನು ಆಳಿದ ಹಾನ್, ತಾಂಗ್, ಸಾಂಗ್, ಮಿಂಗ್, ಯಾನ್ ಮತ್ತು ಕಿಂಗ್ ಈ ಎಲ್ಲ ವಂಶಾಡಳಿತಗಳೂ ಪಕ್ಕದ ವಿಯೆಟ್ನಾಂ ಅನ್ನು ಕಬಳಿಸಲು ಯತ್ನಿಸಿವೆ. 1974ರಲ್ಲಿ ನಡೆದ […]
Date : 24-10-2010 | 39 Comments. | Read More
ಆ ದಿನವನ್ನು ಬಿಜೆಪಿಗೆ ಮತ ಹಾಕದವರೂ ಮರೆಯಲು ಸಾಧ್ಯವಿಲ್ಲ. 2008, ಮೇ 30 ರಂದು ವಿಧಾನಸೌಧದ ಮುಂದೆ ಸೇರಿದ್ದ ಜನಸಾಗರ ಇಂದಿಗೂ ಕಣ್ಣಮುಂದೆ ಬರುತ್ತದೆ. ಅದುವರೆಗೂ ಈ ರಾಜ್ಯ 18 ಮುಖ್ಯಮಂತ್ರಿಗಳನ್ನು ಕಂಡಿದ್ದರೂ ಬಿ.ಎಸ್. ಯಡಿಯೂರಪ್ಪನವರಿಗೆ ಕೊಟ್ಟಷ್ಟು ಪ್ರೀತಿ-ಆದರದಿಂದ ಬಹುಶಃ ಯಾರನ್ನೂ ಗದ್ದುಗೆ ಮೇಲೆ ಕೂರಿಸಿರಲಿಲ್ಲ. 1993ರಲ್ಲಿ ಡಾ. ರಾಜ್ಕುಮಾರ್ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಮಾಡುವ ಸಂದರ್ಭದಲ್ಲಿ ವಿಧಾನಸೌಧದ ಮುಂಭಾಗ ಎಷ್ಟು ಕಳೆಗಟ್ಟಿತ್ತೋ ಅದನ್ನೂ ಮೀರಿಸುವಂತಿತ್ತು ಅಂದಿನ ಸಂಭ್ರಮ. ನಾನು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ…. […]
Date : 19-10-2010 | 15 Comments. | Read More
ಆ ಪಂದ್ಯವನ್ನು ಯಾವ ಕ್ರಿಕೆಟ್ ಪ್ರೇಮಿಯೂ ಮರೆಯಲು ಸಾಧ್ಯವಿಲ್ಲ. ಅದು 1999 ಮಾರ್ಚ್ 26-30, ಬಾರ್ಬಡಾಸ್. ಅಂದು ನಡೆದಿದ್ದ ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟೆಸ್ಟ್ನ ಮೊದಲ ಮೂರು ದಿನಗಳಲ್ಲೂ ಆಸ್ಟ್ರೇಲಿಯಾದ್ದೇ ಪ್ರಾಬಲ್ಯ. ನಾಯಕ ಸ್ಟೀವ್ ವಾ ಬಾರಿಸಿದ ಅಮೋಘ 199 ರನ್ಗಳ ನೆರವಿನೊಂದಿಗೆ ಆಸ್ಟ್ರೇಲಿಯಾ 490 ರನ್ಗಳನ್ನು ಹೊಡೆಯಿತು. ವೆಸ್ಟ್ ಇಂಡೀಸ್ 98 ರನ್ಗಳಿಗೆ 6 ವಿಕೆಟ್ಗಳನ್ನು ಕಳೆದುಕೊಂಡು ಹೀನಾಯ ಸ್ಥಿತಿಯಲ್ಲಿತ್ತು. ಅಂತಹ ಸ್ಥಿತಿಯಲ್ಲಿ ಶೆರ್ವಿನ್ ಕ್ಯಾಂಬೆಲ್ ಮತ್ತು ರಿಡ್ಲಿ ಜೇಕಬ್ಸ್ ನೀಡಿದ 153 ರನ್ಗಳ […]
Date : 03-10-2010 | 31 Comments. | Read More
After Nehru, Who? 1964ರ ಮೇ 27ರಂದು ಇಂಥದ್ದೊಂದು ಪ್ರಶ್ನೆ ಕಾಶ್ಮೀರ ದಿಂದ ಕನ್ಯಾಕುಮಾರಿಯವರೆಗೂ ಕಾಡಿದ್ದು ಖಂಡಿತ ನಿಜ. ಸ್ವತಂತ್ರ ಭಾರತದ ಮೊಟ್ಟ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಹೃದಯಾಘಾತದಿಂದ ನಿಧನರಾಗಿದ್ದರು. ಹಾಗಂತ ಆಳುವ ಕಾಂಗ್ರೆಸ್ ಪಕ್ಷದಲ್ಲಿ ಈ ದೇಶವನ್ನು ಮುನ್ನಡೆಸು ವಂಥ ನಾಯಕರೇ ಇಲ್ಲ ಎಂಬ ಕಾರಣಕ್ಕೆ ಆ ಪ್ರಶ್ನೆ ಮೂಡಿರಲಿಲ್ಲ. ಭಾರತಕ್ಕೆ ಸಮರ್ಥ ನಾಯಕತ್ವ ನೀಡುತ್ತಾರೆ, ಪ್ರಗತಿಯ ಪಥ ದಲ್ಲಿ ಕೊಂಡೊಯ್ಯುತ್ತಾರೆ, ಇನ್ನು ಮುಂದಾದರೂ ನಮ್ಮೆಲ್ಲರ ಯೋಗಕ್ಷೇಮವನ್ನು ನೋಡಿಕೊಳ್ಳುತ್ತಾರೆ, ಹಿತಾಸಕ್ತಿಯನ್ನು ಕಾಪಾಡುತ್ತಾರೆ ಎಂಬ […]