ಕಣ್ಣಿಲ್ಲದ ಅವರು ಸ್ಫೂರ್ತಿಯ ಸ್ವರ್ಗ ತೋರುತ್ತಾರೆ!
Saturday, September 24th, 2011
26-09-2010 ಸವಾಯಿ ಗಂಧರ್ವ ಸಭಾಗೃಹ ದೇಶಪಾಂಡೆ ನಗರ, ಹುಬ್ಬಳ್ಳಿ ‘ಇಷ್ಟು ತಡವಾಗಿಯಾದರೂ ನೀವು ಶ್ರೀನಿವಾಸ ತೋಫಖಾನೆಯವರನ್ನು ಅಭಿನಂದಿಸಿ ಶಾಪಮುಕ್ತರಾದಿರಿ. ಇವರನ್ನು ಅಭಿನಂದಿಸುವುದನ್ನೇನಾದರೂ ಮರೆತಿದ್ದರೆ ಮುಂದಿನ ತಲೆಮಾರು ನಿಮಗೆ ಶಾಪಹಾಕುತಿತ್ತು. ಒಂದು ಊರು ಬೆಳೆಯುವುದು ಅಗಲವಾದ ರಸ್ತೆಗಳಿಂದಲ್ಲ, ದೊಡ್ಡ ದೊಡ್ಡ ಕಟ್ಟಡಗಳಿಂದಲೂ ಅಲ್ಲ. ತೋಫಖಾನೆಯಂಥವರಿದ್ದರೆ ಊರು ಬೆಳೆಯುತ್ತದೆ, ಪ್ರಸಿದ್ಧವಾಗುತ್ತದೆ. ಗದಗಕ್ಕೆ ಹೆಸರು ಬಂದಿದ್ದು ಕುಮಾರವ್ಯಾಸನ ನಾಡೆಂಬ ಕಾರಣಕ್ಕೆ, ಷರೀಫರಿಂದಾಗಿ ಹಾವೇರಿಯ ಶಿಶುವಿನಹಾಳ ಪ್ರಸಿದ್ಧವಾಯಿತು, ಹಾಗೆ ತೋಫಖಾನೆಯವರಂಥವರು ಜನ್ಮತಳೆದ ಕಾರಣ ನಮ್ಮ ನಾಡಿಗೆ ಹೆಸರು ಬಂದಿದೆ.’ ಅಂದು ಗದುಗಿನ ತೋಂಟದಾರ್ಯ [...]












