ಗೋಧ್ರಾ ದುರಂತ, ಗುಜರಾತ್ ಹಿಂಸಾಚಾರ ಎರಡನ್ನೂ ಮರೆಯಬೇಕಾದ ಕಾಲ ಬಂತೇ?
Friday, March 15th, 2013
ಇಂಥದ್ದೊಂದು ಸಕಾರಾತ್ಮಕ ಬೆಳವಣಿಗೆ ಕನಿಷ್ಠ ಗುಜರಾತ್ನಲ್ಲಂತೂ ಕಂಡುಬರುತ್ತಿದೆ! ಅದಕ್ಕೂ ಮೊದಲು ಹತ್ತು ವರ್ಷಗಳ ಕಾಲ ಹಿಂದು-ಮುಸ್ಲಿಮರು ಪರಸ್ಪರ ಮುಖ ನೋಡಿಕೊಳ್ಳದಷ್ಟು ದೂರವಾಗುವಂತೆ ಮಾಡಿದ ಘಟನೆಯನ್ನು ಗಮನಿಸೋಣ. 2001, ಅಕ್ಟೋಬರ್ 7ರಂದು ಗುಜರಾತ್ನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ ಇನ್ನೂ ವಿಧಾನಸಭೆಯ ಸದಸ್ಯರಾಗಿ ಆಯ್ಕೆಯಾಗಿಯೇ ಇರಲಿಲ್ಲ. ಸಂವಿಧಾನದ ನಿಯಮದಂತೆ ಚುನಾವಣೆಯಲ್ಲಿ ಆರಿಸಿಬರುವ ಸಲುವಾಗಿ 2002, ಫೆಬ್ರವರಿ 19ರಂದು ರಾಜ್ಕೋಟ್ನಿಂದ ವಿಧಾನಸಭೆಗೆ ಸ್ಪರ್ಧಿಸಿದರು. ಫೆಬ್ರವರಿ 24ರಂದು ಫಲಿತಾಂಶ ಪ್ರಕಟವಾಯಿತು. ಮೋದಿ ಗೆಲುವು ಸಾಧಿಸಿದರು. ಇದಾಗಿ ಮೂರು ದಿನಗಳಲ್ಲಿಯೇ ಅಂದರೆ, [...]


















