ಮನದ ಬಾಗಿಲೇ ಮುಚ್ಚಿರುವಾಗ ಗುಡಿಗಳ ಕದ ತೆರೆಯುವರೆ?
Monday, May 28th, 2012
ಶ್ರೀ ನಾರಾಯಣ ಗುರುಗಳು ಯಾರಿಗೆ ತಾನೇ ಗೊತ್ತಿಲ್ಲ? ಒಮ್ಮೆ ಗುರುಗಳು ರೈಲಿನಲ್ಲಿ ಸಂಚರಿಸುತ್ತಿರುತ್ತಾರೆ. ಅವರ ಸಹಪ್ರಯಾಣಿಕನಾಗಿದ್ದ ನಂಬೂದರಿಯೊಬ್ಬ,”ನಿಮ್ಮ ಹೆಸರೇನು?’ ಎಂದು ಪ್ರಶ್ನಿಸುತ್ತಾನೆ. ಗುರುಗಳು: ನಾರಾಯಣ ನಂಬೂದರಿ: ನಿಮ್ಮ ಜಾತಿ? ಗುರುಗಳು: ನೋಡಿದರೆ ಗೊತ್ತಾಗುವುದಿಲ್ಲವೆ? ನಂಬೂದರಿ: ಉಹೂಂ ಗುರುಗಳು: ನೋಡಿದರೆ ಗೊತ್ತಾಗದಿದ್ದಾಗ ಹೇಳಿದರೆ ಹೇಗೆ ಗೊತ್ತಾಗುತ್ತದೆ?! ಎಂದು ಕೇಳಿದಾಗ ನಂಬೂದರಿ ತಬ್ಬಿಬ್ಬಾಗುತ್ತಾನೆ.

















