Date : 12-08-2015, Wednesday | no Comment
ಮೈಸೂರಿನಲ್ಲಿ ವಿಮಾನ ಹಾರಾಟ ಪುನರಾರಂಭ : ಕೇಂದ್ರ ಸಚಿವರ ಭೇಟಿ ಮಾಡಿದ ಸಂಸದ ಪ್ರತಾಪಸಿಂಹ…
ಹೊಸದಿಲ್ಲಿ, ಆ.10 : ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರು ಕೇಂದ್ರ ವಿಮಾನಯಾನ ಖಾತೆ ಸಚಿವ ಅಶೋಕ್ ಗಜಪತಿರಾಜು ಅವರನ್ನು ಭೇಟಿಮಾಡಿ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ವಿಮಾನಯಾನ ಪುನರಾರಂಭಿಸುವ ಸಂಬಂಧ ಮಾತುಕತೆ ನಡೆಸಿದರು.
ಸೋಮವಾರ ಹೊಸದಿಲ್ಲಿಯಲ್ಲಿ ಸಚಿವರನ್ನು ಭೇಟಿ ಮಾಡಿದ ಸಂಸದ ಪ್ರತಾಪಸಿಂಹ, ಮೈಸೂರಿಗೆ ಶೀಘ್ರದಲ್ಲೇ ವಿಮಾನಯಾನವನ್ನು ಪುನರಾರಂಭಿಸುವಂತೆ ಒತ್ತಾಯಪೂರ್ವಕ ಮನವಿ ಮಾಡಿದರು. ಜತೆಗೆ ವಿಮಾನ ನಿಲ್ದಾಣದ ರನ್ ವೇ ವಿಸ್ತರಿಸುವ ಪ್ರಸ್ತಾವನೆ ಬಗೆಗೂ ಸಚಿವರ ಜತೆ ಮಾತುಕತೆ ನಡೆಸಿದರು.
ಈ ಸಂಬಂಧ ಕೇಂದ್ರದ ತಂಡವೊಂದು ಈಗಾಗಲೇ ಮೈಸೂರು ಮಂಡಕಳ್ಳಿ ವಿಮಾನನಿಲ್ದಾಣದ ಸ್ಥಳ ಪರಿಶೀಲನೆ ನಡೆಸಿದ್ದು ಸದ್ಯದಲ್ಲೇ ಅಂತಿಮ ನಿರ್ಧಾರವನ್ನು ತಿಳಿಸಲಾಗುವುದು ಎಂದು ಸಚಿವ ಅಶೋಕ್ ಗಜಪತಿ ರಾಜು ಅವರು ಸಂಸದ ಪ್ರತಾಪಸಿಂಹ ಅವರಿಗೆ ಆಶ್ವಾಸನೆ ನೀಡಿದರು.