Date : 05-02-2016, Friday | no Comment
ಕೆ. ಆರ್ . ಆಸ್ಪತ್ರೆಯಲ್ಲಿ ಶುದ್ಧ ಕುಡಿಯುವ ನೀರು
ಸಂಸದರ ಕೊಡುಗೆ : ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಈಗ ಉಚಿತವಾಗಿ ಶುದ್ಧ ಕುಡಿಯುವ ನೀರು ಲಭ್ಯ
ಮೈಸೂರು, ಫೆ.04, 2016 : ನಗರದ ಕೆ.ಆರ್ ಆಸ್ಪತ್ರೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಸಂಸದ ಪ್ರತಾಪಸಿಂಹ ಗುರುವಾರ ಲೋಕಾರ್ಪಣೆಗೊಳಿಸಿದರು.
ಜಿಲ್ಲಾ ಆಸ್ಪತ್ರೆಯಾಗಿರುವ ನಗರದ ದೊಡ್ಡಾಸ್ಪತ್ರೆಗೆ ನಿತ್ಯ ಸಾವಿರಾರು ಬಡ ರೋಗಿಗಳು ಚಿಕಿತ್ಸೆಗೆ ಹಾಗೂ ಸಂಬಂಧಿಕರು ರೋಗಿಗಳ ಆರೈಕೆಗಾಗಿ ಭೇಟಿ ನೀಡುತ್ತಿರುತ್ತಾರೆ. ಇವರ ಅನುಕೂಲಕ್ಕಾಗಿ ಶುದ್ಧ ಕುಡಿಯುವ ನೀರಿನ ಘಟಕ ಆರಂಭಿಸಲಾಗಿದೆ.
ಈ ತನಕ ಸಾರ್ವಜನಿಕರು ಶುದ್ಧ ನೀರಿಗಾಗಿ ಒಂದು ಬಾಟಲ್ ನೀರಿಗೆ ಸುಮಾರು 10ರಿಂದ20ರೂಪಾಯಿ ಪಾವತಿಸಿ ಆಸ್ಪತ್ರೆ ಹೊರಗಡೆ ಖರೀದಿಸುತ್ತಿದ್ದರು. ಇದನ್ನು ಮನಗಂಡು ಕೆ.ಆರ್ ಆಸ್ಪತ್ರೆಯ ಆವರಣದಲ್ಲಿ 16ನೇ ಲೋಕಸಭಾ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಡಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಸಂಸದ ಪ್ರತಾಪ್ ಸಿಂಹ ಸ್ಥಾಪಿಸಲು ಮುಂದಾದರು.
ಮುಂದಿನ ದಿನಗಳಲ್ಲಿ ಈ ಶುದ್ಧ ಕುಡಿಯುವ ನೀರಿನ ಘಟಕದಿಂದ ಪೈಪ್ ಲೈನ್ ಮುಂಖಾಂತರ ಚಲುವಾಂಬ ಆಸ್ಪತ್ರೆ ಹಾಗೂ ಜಯದೇವ ಆಸ್ಪತ್ರೆಗಳಿಗೆ ನೀರು ಸರಬರಾಜು ಮಾಡಲಾಗುವುದು ಎಂದು ಸಂಸದ ಪ್ರತಾಪ ಸಿಂಹ ಈ ಸಂದರ್ಭದಲ್ಲಿ ಆಶ್ವಾಸನೆ ನೀಡಿದರು.
* ಸಮಸ್ಯೆ ಆಲಿಸಿದ ಸಂಸದ :
ಇದೇ ವೇಳೆ ಆಸ್ಪತ್ರೆ ಆವರಣದಲ್ಲಿ ಕಾರ್ಯನಿರ್ವಹಿಸುವ ಸುಮಾರು 400ಕ್ಕೂ ಹೆಚ್ಚು ಪೌರ ಕಾರ್ಮಿಕರ ಸಮಸ್ಯೆಯನ್ನು ಸಂಸದ ಪ್ರತಾಪಸಿಂಹ ಆಲಿಸಿದರು. ಜತೆಗೆ ಅವರೆಲ್ಲರಿಗೂ ಆಟಲ್ ಜೀ ಪಿಂಚಣಿ ಯೋಜನೆಯಡಿ ಪಿಂಚಣಿ ಸೌಲಭ್ಯವನ್ನು ಕಲ್ಪಿಸಲಾಗುವುದು ಹಾಗೂ ಅದರ ಮೊದಲ ಕಂತನ್ನು ಯಾರಾದರು ದಾಣಿಗಳಿಂದ ಭರಿಸಲಾಗುವುದು ಎಂದು ಭರವಸೆ ನೀಡಿದರು .