Date : 01-05-2013 | 21 Comments. | Read More
ಖ್ಯಾತ ಸಾಹಿತಿ ಬೀChiಯುವರ ‘ಬೆಳ್ಳಿ ತಿಂಮ ನೂರೆಂಟು ಹೇಳಿದ’ ಪುಸ್ತಕದಲ್ಲಿ ಒಬ್ಬ ರಾಜಕಾರಣಿಯ ಕಥೆ ಬರುತ್ತದೆ. ಮೈದಾನಕ್ಕೆ ಕಾಪೌಂಡ್ ಇಲ್ಲ, ಭಾಷಣಕ್ಕೆ ಇತಿಮಿತಿಯಿಲ್ಲ, ಹೇಳುವವರಿಗೆ ಬೇಸರವಿಲ್ಲ, ಕೇಳುವವರಿಗೆ ಬೇರೆ ಕೆಲಸವಿಲ್ಲ. ರಾಜಕಾರಣಿಯ ಭಾಷಣ ಹರಿಯಿತು, ಊರ ಮಧ್ಯೆಯ ಗಟಾರದಂತೆ. ರಾಜಕಾರಣಿ: ಇಂದು ನಮ್ಮ ಜನಕ್ಕೆ ಏನು ಬೇಕು ಹೈಡ್ರೋಜನ್, ಆಟಂ ಬಾಂಬುಗಳೇನು? ‘ಅಲ್ಲ, ಅಲ್ಲ..’ ಎಂದು ಒಕ್ಕೊರಲಿನಿಂದ ಕೂಗಿತು ಸಭೆ. ರಾಜಕಾರಣಿ: ಸಾವಿರಾರು ಮೈಲು ಸಮುದ್ರವನ್ನು ಹಾರುವ ವಿಮಾನವೇನು? ಜನ: ಅಲ್ಲ, ಅಲ್ಲ! ಅದರಿಂದ ಉತ್ತೇಜಿತನಾದ ರಾಜಕಾರಣಿ […]
Date : 23-04-2013 | 9 Comments. | Read More
Why Tendulkar must retire now? ಹಾಗಂತ ಕ್ರಿಕೆಟ್ ಇತಿಹಾಸಕಾರ ರಾಮಚಂದ್ರ ಗುಹಾ ಕಳೆದ ತಿಂಗಳು ಲೇಖನವೊಂದನ್ನು ಬರೆದಿದ್ದರು. 1951, ಡಿಸೆಂಬರ್. ಹೊಸದಿಲ್ಲಿಯಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವೆ ಟೆಸ್ಟ್ ಪಂದ್ಯವೊಂದು ಆರಂಭವಾಯಿತು. ವಿಜಯ್ ಮರ್ಚೆಂಟ್ ಸೊಗಸಾದ ಸೆಂಚುರಿ ಹೊಡೆದರು. ಅದರ ಬೆನ್ನಲ್ಲೇ ಅಶ್ಚರ್ಯಕರವಾಗಿ ನಿವೃತ್ತಿ ಘೋಷಿಸಿಬಿಟ್ಟರು. ಈ ಬಗ್ಗೆ ಸ್ನೇಹಿತರೊಬ್ಬರು ಪ್ರಶ್ನಿಸಿದಾಗ, ‘ಇವನಿನ್ನೂ ಏಕೆ ರಿಟೈರ್ಡ್ಆಗಿಲ್ಲ?’ ಎಂದು ಜನ ಕೇಳುವವರೆಗೂ ಕಾಯಬಾರದು ಎಂದಿದ್ದರು. ಈ ದೃಷ್ಟಾಂತವನ್ನು ಉದಾಹರಿಸಿ ಗುಹಾ ಬರೆದಿದ್ದರು. ದುರಾದೃಷ್ಟವಶಾತ್, ‘ನೀವು ನಿವೃತ್ತಿಯಾಗುವುದು ಯಾವಾಗ?’ […]
Date : 16-04-2013 | 24 Comments. | Read More
ಅಂಬೇಡ್ಕರ್ ಎಂದರೆ ಹಿಂದು ಧರ್ಮದಲ್ಲಿನ ಹುಳುಕುಗಳನ್ನು ಎತ್ತಿ ತೋರಿದವರು, ಜಾತಿ ವ್ಯವಸ್ಥೆಯ ಕೆಡುಕು ಮತ್ತು ದೌರ್ಜನ್ಯದ ವಿರುದ್ಧ ಧ್ವನಿಯೆತ್ತಿದವರು, ಕೇವಲ ದಲಿತ ನಾಯಕರು, ಮೀಸಲಾತಿಯ ಪ್ರತಿಪಾದಕರು ಎಂದು ದಯವಿಟ್ಟು ಭಾವಿಸಬೇಡಿ. ಅವರೊಬ್ಬ ಅಪ್ರತಿಮ ರಾಷ್ಟ್ರವಾದಿಯೂ ಹೌದು. ಒಮ್ಮೆ ಶಾಲೆಯಲ್ಲಿ ಓದುತ್ತಿರುವಾಗ ಅಪ್ಪನನ್ನು ನೋಡಬೇಕೆನಿಸಿತು. ಸಹೋದರನ ಜತೆಗೂಡಿ ಹೊರಟೇಬಿಟ್ಟ. ಇಬ್ಬರೂ ಮಾಸೂರು ರೈಲು ನಿಲ್ದಾಣಕ್ಕೆ ಬಂದಿಳಿದರು. ಗಾಡಿಯೊಂದನ್ನು ಗೊತ್ತುಪಡಿಸಿ ಊರತ್ತ ಹೊರಟರು. ಸ್ವಲ್ಪ ದೂರ ಹೋಗಿದ್ದಾರೆ, ಗಾಡಿಚಾಲಕನಿಗೆ ಗೊತ್ತಾಯಿತು ಅವರು ಮಹರ್ ಎಂಬ ಕೆಳಜಾತಿಗೆ ಸೇರಿದವರು, ದಲಿತರೆಂದು. ಗಾಡಿಯನ್ನು […]
Date : 09-04-2013 | 15 Comments. | Read More
ಮೊನ್ನೆ ಗುರುವಾರ ಬೆಳಗ್ಗೆ ಭಾರತೀಯ ಕೈಗಾರಿಕಾ ಒಕ್ಕೂಟ(CII)ವನ್ನು ಉದ್ದೇಶಿಸಿ ಕಾಂಗ್ರೆಸ್ ಉಪಾಧ್ಯಕ್ಷ ಹಾಗೂ ಮುಂದಿನ ಪ್ರಧಾನಿ ಅಭ್ಯರ್ಥಿ ಎಂದೇ ಬಿಂಬಿತವಾಗುತ್ತಿರುವ ರಾಹುಲ್ ಗಾಂಧಿಯವರು ಮಾಡಿದ ಭಾಷಣವನ್ನು ಕೇಳಿದ ನಂತರ ಖಂಡಿತ ಅವರ ಕಟ್ಟಾ ವಿರೋಧಿಗಳಲ್ಲೂ ಅಯ್ಯೋ ಎಂಬ ಭಾವನೆ ಮೂಡಿರದೆ ಇರದು. ಭಾಷಣ ಮುಗಿಸುವ ವೇಳೆಗೆ ಸಾಮಾಜಿಕ ಜಾಲತಾಣವಾದ ಟ್ವಿಟ್ಟರ್ನಲ್ಲಿ ಜಾಗತಿಕ ಮಟ್ಟದ(ವರ್ಲ್ಡ್ವೈಡ್) Trendingನಲ್ಲಿ (ಚಾಲ್ತಿಯಲ್ಲಿರುವ ವಿಷಯ) ರಾಹುಲ್ ಎರಡನೇ ಸ್ಥಾನಕ್ಕೇರಿ ಬಿಟ್ಟಿದ್ದರು. Pappu, PappuCII, Rahul Gandhi ಇನ್ನು ಮುಂತಾದ ಹೆಸರಿನ ಹ್ಯಾಶ್ಟ್ಯಾಗ್ಗಳು (ಪದ, ಪದಗುಚ್ಛ) […]
Date : 01-04-2013 | 21 Comments. | Read More
Should i marry every woman I sleep with? ‘ನನ್ನ ಪತ್ನಿಯನ್ನು ಮದುವೆಯಾಗುತ್ತೀಯಾ?’ ಎಂದು ಕವಾಸ್ ಮಾಣಿಕ್ಷಾ ನಾನಾವತಿ ಕೇಳಿದಾಗ ಪ್ರೇಮ್ ಭಗವಾನ್ ದಾಸ್ ಅಹುಜಾ ಹೇಳಿದ ಮಾತುಗಳಿವು. ಕವಾಸ್ ಮಾಣಿಕ್ಷಾ ನಾನಾವತಿ ಭಾರತೀಯ ನೌಕಾಪಡೆಯ ಲೆಫ್ಟಿನೆಂಟ್ ಕಮಾಂಡರ್ ಆಗಿದ್ದರು. ಹಾಗಾಗಿ ಕರ್ತವ್ಯದ ಸಲುವಾಗಿ ಸದಾ ಮನೆಯಿಂದ ದೂರವೇ ಇರುತ್ತಿದ್ದರು. ಈ ಮಧ್ಯೆ 1959, ಏಪ್ರಿಲ್ 27ರಂದು ಮನೆಗೆ ಮರಳಿದಾಗ ಪತ್ನಿ ಸಿಲ್ವಿಯಾ ಏಕೋ ತನ್ನಿಂದ ವಿಮುಖಳಾಗಿರುವುದನ್ನು ಗಮನಿಸುತ್ತಾರೆ. ಆಕೆ ಸಮೀಪದಲ್ಲೇ ಇದ್ದ ಸ್ಫುರದ್ರೂಪಿ ಪ್ಲೇ […]
Date : 01-04-2013 | 15 Comments. | Read More
ಅದು 1928, ಅಕ್ಟೋಬರ್ 30. ಸೈಮನ್ ಆಯೋಗ ಇಂಗ್ಲೆಂಡ್ನಿಂದ ಆಗಮಿಸಿತ್ತು, ಭಾರತೀಯರಿಗೆ ಎಷ್ಟು ಸ್ವಾತಂತ್ರ್ಯ ಕೊಡಬೇಕೆಂಬುದನ್ನು ನಿರ್ಧರಿಸಲು. ಅದು ಲಾಹೋರ್ ರೈಲು ನಿಲ್ದಾಣಕ್ಕೆ ಬಂದಿಳಿಯುವ ವೇಳೆಗೆ ಲಾಲಾ ಲಜಪತ್ರಾಯ್ ಹಾಗೂ ಪಂಡಿತ್ ಮದನ್ ಮೋಹನ್ ಮಾಳವೀಯ ನೇತೃತ್ವದಲ್ಲಿ ‘ನೌಜವಾನ್ ಭಾರತ್ ಸಭಾ’ ಭಾರಿ ಪ್ರತಿಭಟನೆ ಹಮ್ಮಿಕೊಂಡಿತ್ತು. ಸ್ಟೇಷನ್ನಿನಲ್ಲಿ ಇಳಿದ ಕೂಡಲೇ ಸೈಮನ್ ಕಮಿಷನ್ನಿಗೆ ಕಪ್ಪು ಬಾವುಟ ತೋರಿಸುವ ಮತ್ತು ‘ವಾಪಸ್ಸು ಹೋಗಿ’ ಎಂದು ಘೋಷಣೆ ಹಾಕುವ ಯೋಜನೆ ಅದಾಗಿತ್ತು. ಸೈಮನ್ ವಿರೋಧಿ ಪ್ರದರ್ಶನದ ನಿರ್ಧಾರ ಆಗುತ್ತಿದ್ದಂತೆಯೇ ಲಾಲಾ […]
Date : 17-03-2013 | 31 Comments. | Read More
ಈ ಹಿಂದೆ 2007ರಲ್ಲಿ ನಡೆದಿದ್ದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ 1606, ಜೆಡಿಎಸ್ 1502 ಸೀಟುಗಳೊಂದಿಗೆ ಮೊದಲ ಹಾಗೂ ಎರಡನೇ ಸ್ಥಾನ ಗಳಿಸಿದರೆ 1180 ಸ್ಥಾನಗಳೊಂದಿಗೆ ಉಳಿದೊಂದೇ ಕೊನೆಯ ಸ್ಥಾನವನ್ನು ಬಿಜೆಪಿ ಪಡೆದುಕೊಂಡಿತ್ತು. ಆದರೇನಂತೆ 2008ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 80, ಜೆಡಿಎಸ್ 28 ಸ್ಥಾನ ಪಡೆದುಕೊಂಡರೆ, ಬಿಜೆಪಿ 110 ಸ್ಥಾನ ಗಳಿಸಿ ಅಧಿಕಾರ ಹಿಡಿಯಿತು.
Date : 15-03-2013 | 24 Comments. | Read More
‘ಒಬ್ಬ ಸಾಹಿತಿ ಆಡಿದ ಅಪ್ಪಟ ತಾಜಾ ಸುಳ್ಳಿನ ಸ್ಯಾಂಪಲ್ ಕೊಡುತ್ತೇನೆ. ಶ್ರೀರಂಗಪಟ್ಟಣದಲ್ಲಿ ಸ್ಥಾಪನೆಯಾಗಲಿರುವ ಕೇಂದ್ರೀಯ ವಿಶ್ವವಿದ್ಯಾಲಯಕ್ಕೆ ಹೆಸರಿಡುವುದನ್ನು ವಿರೋಧಿಸುವಾಗ ಟಿಪ್ಪು ಹಿಂದು ದ್ವೇಷಿಯೆಂದೂ, 71 ಸಾವಿರ ಹಿಂದುಗಳನ್ನು ಬಲಾತ್ಕಾರವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಿದನೆಂದು ಸುಳ್ಳು ಹೇಳಿದ್ದಾರೆ. ಇದನ್ನು ಕೇಳಿದೊಡನೆ ಅವನ ಆಳ್ವಿಕೆಯ ಕಾಲದಲ್ಲಿ ಕೊಡಗು ಪ್ರಾಂತ್ಯದಲ್ಲಿ ಅಷ್ಟು ಜನಸಂಖ್ಯೆ ಇತ್ತೇ ಎಂಬ ಬಗ್ಗೆ ಸಂಶಯವಿದೆ. ಸರ್ಕಾರವೇ ಪ್ರಕಟಿಸಿರುವ ಕೂರ್ಗ್ ಗೆಝೆಟಿಯರ್ ನೋಡಿದೆ. 1871ರಲ್ಲಿ ಕೂರ್ಗ್ನಲ್ಲಿ ಕೇವಲ 1,68,312 ಜನರಿದ್ದರು. 1981ರ ಜನಗಣತಿ ಪ್ರಕಾರ 3,22,829 ಜನಸಂಖ್ಯೆಯಿತ್ತು. […]
Date : 15-03-2013 | 2 Comments. | Read More
ಇಂಥದ್ದೊಂದು ಸಕಾರಾತ್ಮಕ ಬೆಳವಣಿಗೆ ಕನಿಷ್ಠ ಗುಜರಾತ್ನಲ್ಲಂತೂ ಕಂಡುಬರುತ್ತಿದೆ! ಅದಕ್ಕೂ ಮೊದಲು ಹತ್ತು ವರ್ಷಗಳ ಕಾಲ ಹಿಂದು-ಮುಸ್ಲಿಮರು ಪರಸ್ಪರ ಮುಖ ನೋಡಿಕೊಳ್ಳದಷ್ಟು ದೂರವಾಗುವಂತೆ ಮಾಡಿದ ಘಟನೆಯನ್ನು ಗಮನಿಸೋಣ. 2001, ಅಕ್ಟೋಬರ್ 7ರಂದು ಗುಜರಾತ್ನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ ಇನ್ನೂ ವಿಧಾನಸಭೆಯ ಸದಸ್ಯರಾಗಿ ಆಯ್ಕೆಯಾಗಿಯೇ ಇರಲಿಲ್ಲ. ಸಂವಿಧಾನದ ನಿಯಮದಂತೆ ಚುನಾವಣೆಯಲ್ಲಿ ಆರಿಸಿಬರುವ ಸಲುವಾಗಿ 2002, ಫೆಬ್ರವರಿ 19ರಂದು ರಾಜ್ಕೋಟ್ನಿಂದ ವಿಧಾನಸಭೆಗೆ ಸ್ಪರ್ಧಿಸಿದರು. ಫೆಬ್ರವರಿ 24ರಂದು ಫಲಿತಾಂಶ ಪ್ರಕಟವಾಯಿತು. ಮೋದಿ ಗೆಲುವು ಸಾಧಿಸಿದರು. ಇದಾಗಿ ಮೂರು ದಿನಗಳಲ್ಲಿಯೇ ಅಂದರೆ, […]
Date : 23-02-2013 | 16 Comments. | Read More
2011, ಮೇ 2. ಪಾಕಿಸ್ತಾನದ ಅಬೋಟಾಬಾದ್ನಲ್ಲಿ ಅಡಗಿ ಕುಳಿತಿದ್ದ ಒಸಾಮಾ ಬಿನ್ ಲಾಡೆನ್ನನ್ನು ಹೆಕ್ಕಿ ಕೊಂದಿದ್ದಲ್ಲದೆ ಆತನ ಹೆಣವನ್ನು ಸಂಸ್ಕಾರ ಮಾಡುವ ಬದಲು ಸಮುದ್ರಕ್ಕೆ ಬಿಸಾಡಿ ಅಮೆರಿಕ ಸೇಡು ತೀರಿಸಿಕೊಂಡಾಗ ಅಲ್ ಖೈದಾ ಅಮೆರಿಕದ ವಿರುದ್ಧ ಪ್ರತೀಕಾರ ತೆಗೆದುಕೊಂಡೇ ತೀರುತ್ತದೆ ಎಂದು ಎಲ್ಲರೂ ಭಾವಿಸಿದರು. ಅದಕ್ಕೆ ತಕ್ಕಂತೆ 2011, ಮೇ 6ರಂದು ಲಾಡೆನ್ ಸಾವನ್ನು ಖಾತ್ರಿಪಡಿಸಿದ ಅಲ್ ಖೈದಾ ಕೂಡ ತನ್ನ ವೆಬ್ಸೈಟ್ನಲ್ಲಿ ಅಂಥದ್ದೇ ಮಾತನಾಡಿತು. ಪಾಕಿಸ್ತಾನದ ತೆಹ್ರೀಕೆ ತಾಲಿಬಾನ್ ಕೂಡ ಸೇಡಿನ ಸೊಲ್ಲೆತ್ತಿತು. ಹಾಗಾಗಿ ಭಯ, […]