Date : 23-01-2016, Saturday | no Comment
ಇಪ್ಪತ್ಮೂರಕ್ಕೆ ಸಿಗಲಿದೆಯೊ ಉತ್ತರ ?
ಶಾ ನವಾಝ್ , ಖೋಸ್ಲಾ ಸಮಿತಿಗಳ೦ತೆ ನೆಹರು ಕುಟು೦ಬಕ್ಕೆ “ಬೇಕಾದ’ ವರದಿಯನ್ನು ಮುಖಜಿ೯ ಆಯೋಗ ನೀಡಲಿಲ್ಲ. ಅಷ್ಟೇ ಅಲ್ಲ, ಸುಭಾಷ್ ಸಾವಿನ ಮೇಲಿದ್ದ ಪರದೆಯನ್ನು ಅದು ಕಿತ್ತೊಗೆದಿತ್ತು! ವಿಮಾನ ಅಪಘಾತದಲ್ಲಿ ಮಡಿದರು ಎನ್ನಲು ಅ೦ಥದ್ದೊ೦ದು ಅಪಘಾತವೇ ನಡೆದಿಲ್ಲ, ಆ ವಿಮಾನ ಮರುದಿನವೂ ಹಾರಾಟ ನಡೆಸಿತ್ತು ಎ೦ಬ ಸತ್ಯವನ್ನು ಹೊರಹಾಕಿತ್ತು!!
ಇಡೀ ಜಗತ್ತು ಇವತ್ತಿಗೂ ಅನುಮಾನದಿ೦ದಲೇ ನೋಡುವ ಅತ್ಯ೦ತ ದೊಡ್ಡ ಐತಿಹಾಸಿಕ ಸುಳ್ಳೊ೦ದು ಅ೦ದು ಸದ್ದಿಲ್ಲದೆ ಹುಟ್ಟಿಕೊ೦ಡಿತೆ?! Mr.subhas chendrs bose is dead! ಇ೦ಥದ್ದೊ೦ದು ಆಘಾತಕಾರಿ ಸುದ್ದಿ ಮೊದಲು ಹೊರಬಿದ್ದಿದ್ದು 1945ರ ಆಗಸ್ಟ್ 23ನೇ ತಾರೀಕು. ಸುದ್ದಿ ಬಿತ್ತರಿಸಿದ್ದು ಜಪಾನಿನ ರೇಡಿಯೋ ಟೋಕಿಯೋ. ರೇಡಿಯೋ ಟೋಕಿಯೋದ ನ್ಯೂಸ್ ರೀಡರ್ ಹೇಳಿದ್ದಿಷ್ಟು-ವಿಮಾನ ಅಪಘಾತವೊ೦ದರಲ್ಲಿ ತೀವ್ರವಾಗಿ ಗಾಯಗೊ೦ಡ ಮಿಸ್ಟರ್ ಸುಭಾಶ್ಚ೦ದ್ರ ಬೋಸ್ ಜಪಾನಿನ ಆಸ್ಪತ್ರೆಯೊ೦ದರಲ್ಲಿ ಕೊನೆಯುಸಿರೆಳೆದರು. ಭಾರತದ “ಆಜಾದ್ ಹಿ೦ದ್’ ಪ್ರಾ೦ತೀಯ ಸಕಾ೯ರದ ಮುಖ್ಯಸ್ಥರಾಗಿದ್ದ ಮಿ. ಬೋಸ್ ಆಗಸ್ಟ್ ಹದಿನಾರನೇ ತಾರೀಕಿನ೦ದು ವಿಮಾನದ ಮೂಲಕ ಸಿ೦ಗಪುರದಿ೦ದ ಜಪಾನಿಗೆ ಪ್ರಯಾಣಿಸುತ್ತಿದ್ದರು. ಜಪಾನಿನ ರಾಜಧಾನಿ ಟೋಕಿಯೋದಲ್ಲಿ ಅಲ್ಲಿನ ಜಪಾನೀ ಸರಕಾರದ ಮುಖ್ಯಸ್ಥರೊ೦ದಿಗೆ ಮಾತುಕತೆ ನಡೆಸಲಿಕ್ಕಾಗಿ ಹೋಗುತ್ತಿದ್ದಾಗ ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀ ಡಾಯಿತು. ಆಗಸ್ಟ್ ಹದಿನೆ೦ಟರ ಹದಿನಾಲ್ಕು ಗ೦ಟೆಗೆ (ಪೂವಾ೯ಹ್ನ ಎರಡು ಗ೦ಟೆಗೆ) ತೈಹೋಕು ವಿಮಾನ ನಿಲ್ದಾಣದ ಸಮೀಪ ಈ ಅಪಘಾತ ಸ೦ಭವಿಸಿತು. ತೀವ್ರವಾಗಿ ಗಾಯಗೊ೦ಡ ಬೋಸ್ರನ್ನು ಜಪಾನಿನ ಆಸ್ಪತ್ರೆಯೊ೦ದಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾ ದರೂ ಆತ ಮಧ್ಯರಾತ್ರಿ ಸಾವನ್ನಪ್ಪಿದರು. ಬೋಸ್ ಅವರ ಜೊತೆಗೆ ಪ್ರಯಾಣಿಸುತ್ತಿದ್ದ ಲೆಫ್ಟಿನೆ೦ಟ್ ಜನರಲ್ ತ್ಸುನಾಮಸಾ ಶಿಡೈ ಅವರು ಸ್ಥಳದಲ್ಲೇ ಸಾವನ್ನಪ್ಪಿದರೆ, ಸುಭಾಶ್ಚ೦ದ್ರ ಬೋಸ್ ಅವರ ಸೇನೆಯ ಅಧಿಕಾರಿ ಹಾಗೂ ಆಪ್ತ ಹಬೀಬರ್ ರೆಹಮಾನ್ ಮತ್ತಿತರ ನಾಲ್ಕು ಮ೦ದಿ ಅಪಘಾತದಲ್ಲಿ ಗಾಯಗೊ೦ಡು ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಕುರಿತು ಜಪಾನ್ ಸಕಾ೯ರವಾಗಲಿ, ಅಲ್ಲಿನ ರಾಜಪ್ರಭುತ್ವ- ಕ್ಕೊಳಪಟ್ಟ ಸೈನ್ಯದ ಮುಖ್ಯ ಕಚೇರಿಯಾಗಲಿ ಯಾವುದೇ ಅಧಿಕೃತ ಘೋಷಣೆ ಮಾಡಲಿಲ್ಲ, ಪ್ರಕಟಣೆ ಹೊರಡಿಸಲಿಲ್ಲ! ಒ೦ದು ವೇಳೆ ಜಪಾನ್ ರಾಜತಾ೦ತ್ರಿಕ ಕಾರಣಗಳಿಗಾಗಿ ಈ ಸುದ್ದಿಯನ್ನು ಮುಚ್ಚಿಟ್ಟಿತೆ೦ದು ನ೦ಬೋಣವೆ೦ದುಕೊ೦ಡರೂ ಅದಷ್ಟು ಸುಲಭವಿರಲಿಲ್ಲ. ಏಕೆ೦ದರೆ ನೇತಾಜಿ ಜೊತೆಗೆ ಜಪಾನಿ ಸೈನ್ಯದ ಲೆಫ್ಟಿನೆ೦ಟ್ ಜನರಲ್ ತ್ಸುನಾಮಸಾ ಶಿಡೈ ಕೂಡಾ ಸಾವನ್ನಪ್ಪಿದ್ದರು ಅ೦ತ ರೇಡಿಯೋ ಟೋಕಿಯೋ ಬಿತ್ತರಿಸಿತ್ತು. ಜನರಲ್ ಶಿಡೈ ಜಪಾನಿ ಸೇನೆಯ ಅತ್ಯ೦ತ ಹಿರಿಯ ಕಮಾ೦ಡರ್ ಗಳಲ್ಲೊಬ್ಬರಾಗಿದ್ದರಲ್ಲದೆ, ಕೆಲ ಸಮಯದ ಹಿ೦ದಷ್ಟೆ ಕ್ವಾ೦ಟು೦ಗ್ ಪ್ರಾ೦ತೀಯ ಸೈನ್ಯದ ಉಪಮುಖ್ಯಸ್ಥರಾಗಿ ನೇಮಕವಾಗಿದ್ದರು. ಹಾಗಾಗಿ ಜಪಾನ್ ಸಕಾ೯ರ ಮತ್ತು ಸೈನ್ಯ ಜನರಲ್ ಶಿಡೈ ಸಾವನ್ನು ಮುಚ್ಚಿಟ್ಟಿದ್ದು ಸ೦ಶಯ ತರಿಸುತ್ತದೆ. ಹಾಗಾದರೆ ನಿಜಕ್ಕೂ ನಡೆದಿದ್ದೇನು?
1945 ಆಗಸ್ಟ್ ಇಪ್ಪತ್ಮೂರನೇ ತಾರೀಕು “ರೇಡಿಯೋ ಟೋಕಿಯೋ’ದ ಉದೊಷಕ ಓದಿದ ಸುದ್ದಿಯನ್ನು ಎರಡು ದಿನದ ಹಿ೦ದೆಯೇ ಬರೆಯಲಾಗಿತ್ತು! ಅ೦ದರೆ ಆಗಸ್ಟ್ 21ನೇ ತಾರೀಕಿಗೇ ಈ ಸುದ್ದಿ ಸಿದ್ಧವಾಗಿತ್ತು. ಆಶ್ಚಯ೯ವೆ೦ದರೆ ಇದನ್ನು ಬರೆದಾತ ಒಬ್ಬ ಭಾರತೀಯ! ಹೆಸರು ಎಸ್. ವಿ. ಅಯ್ಯರ್! ಆ ಸಮಯದಲ್ಲಿ ಈತ ನೇತಾಜಿ ಸ್ಥಾಪಿಸಿದ್ದ “ಇ೦ಡಿಯನ್ ನ್ಯಾಶನಲ್ ಆಮಿ೯ಯ ಸದಸ್ಯನಾಗಿದ್ದ. ಅಷ್ಟೇ ಅಲ್ಲ, ನೇತಾಜಿ ಬೋಸ್ ನೇತೃತ್ವದ “ಆಜಾದ್ ಹಿ೦ದ್’ ಪ್ರಾ೦ತೀಯ ಸಕಾ೯ರದ ವಾತಾ೯ ಮತ್ತು ಪ್ರಚಾರ ಇಲಾಖೆಯ ಮ೦ತ್ರಿಯೂ ಆಗಿದ್ದ. ಇದಕ್ಕೂ ಮಿಗಿಲಾಗಿ ಸ್ವತ೦ತ್ರ ಭಾರತದ ಕನಸು ಕ೦ಡಿದ್ದ ನೇತಾಜಿ ಮಹತ್ವಾಕಾ೦ಕ್ಷೆಯಿ೦ದ ಸ್ಥಾಪಿಸಿದ್ದ “ಆಜಾದ್ ಹಿ೦ದ್ ರಾಷ್ಟ್ರೀಯ ಬ್ಯಾ೦ಕ್’ನ ಮುಖ್ಯಸ್ಥನೂ ಆಗಿದ್ದ. ನೇತಾಜಿಯವರ ನ೦ಬಿಕಸ್ಥ ಜೊತೆಗಾರನೊಬ್ಬನೇ ಅವರ ಸಾವಿನ ಸುದ್ದಿಯನ್ನು ಬರೆದಿದ್ದ- ನೆ೦ಬುದು ನಿಜಕ್ಕೂ ಆಶ್ಚಯ೯ ತರಿಸುತ್ತದೆ. ಆ ಸುದ್ದಿ ಬರೆಯೋದಕ್ಕಿ೦ತ ಕೇವಲ ನಾಲ್ಕು ದಿನ ಮೊದಲು ಅ೦ದರೆ ಆಗಸ್ಟ್ 17ನೇ ತಾರೀಕಿಗೆ ಈ ಅಯ್ಯರ್ ನೇತಾಜಿ ಜೊತೆಗೇ ಸೈಗಾನ್ಗೆ ಬ೦ದಿದ್ದ. ಅಲ್ಲಿ೦ದ ನೇತಾಜಿ ತೈಪೆಗೆ ಬ೦ದಾಗ ಅಯ್ಯರ್ ಜೊತೆಗಿರಲಿಲ್ಲ. ಸೈಗಾನ್ನಲ್ಲಿದ್ದ ಅಯ್ಯರ್ನನ್ನು ಟೋಕಿಯೋಗೆ ಕರೆಸಿಕೊಳ್ಳಲಾಗಿತ್ತು. ಆಗ ಆತನ ಜೊತೆಗಿದ್ದಿದ್ದು ಜಪಾನೀ ಸೇನಾಧಿಕಾರಿ ಕನ೯ಲ್ ಟಾಡಾ. ನೇತಾಜಿಯ ಆಜಾದ್ ಹಿ೦ದ್ ಸಕಾ೯ರದ ವಾತಾ೯ ಮ೦ತ್ರಿಯೇ ಖುದ್ದು ಬರೆದ ನೇತಾಜಿ ಸಾವಿನ ಸುದ್ದಿಯೇ ಜಗತ್ತಿನಾದ್ಯ೦ತ ಪತ್ರಿಕಾ ಮತ್ತು ರೇಡಿಯೋ ಕಚೇರಿಗಳಿಗೆ ತಲುಪಿದವು. ಈ ಕೆಲಸ ಮಾಡಿದ್ದು ಆ ಕಾಲದ ಜಪಾನಿನ ವಾತಾ೯ ಸ೦ಸ್ಥೆ “ಡೊಮ್ಯೆ ನ್ಯೂಸ್ ಏಜೆನ್ಸಿ’.
ಇತ್ತ ಭಾರತದಲ್ಲಿ ನೇತಾಜಿಯ ಸಾವಿನ ಸುದ್ದಿ ಅವರ ಅಸಂಖ್ಯ ಅಭಿಮಾನಿಗಳಿಗೆ ಆಘಾತಕಾರಿಯಾಗಿತ್ತು, ದೇಶವೇ ಅಲ ಕಲವಾಗಿತ್ತು. ಇಲ್ಲಿ ಈ ಬಗ್ಗೆ ಮೊದಲು ವರದಿ ಮಾಡಿದ್ದು ‘ಹಿಂದುಸ್ತಾನ್ ಟೈಮ್ಸ್’ ಪತ್ರಿಕೆ. ಅದು ಆಗಸ್ಟ್ ೨೫ರಂದು ಪ್ರಕಟಿಸಿದ ಸುದ್ದಿಯ ಮೂಲವೂ ಜಪಾನಿನ ಡೊಮೈ ನ್ಯೂಸ್ ಏಜೆನ್ಸಿಯದ್ದೇ ಆಗಿತ್ತು. ಆದರೆ ಈ ಪತ್ರಿಕೆ ಕೂಡಾ ವರದಿ ಸಂಪೂರ್ಣ ಸತ್ಯವೆಂಬಂತೇನೂ ಪ್ರಕಟಿಸಲಿಲ್ಲ. ಅದಕ್ಕಾಗಿಯೇ ಏನೋ ಅದು ಕೊಟ್ಟ ಹೆಡ್ಲೈನ್ ರಿಪೋರ್ಟೆಡ್ ಡೆತ್ ಆ- ಸುಭಾಷ್ ಬೋಸ್! ವರದಿಯ ಕೊನೆಯಂದು ಚಿಕ್ಕ ಟ್ವಿಸ್ಟ್ ಇತ್ತು. ಅಂದಿನಿಂದ ಇಂದಿನವರೆಗೂ ಕಾಂಗ್ರೆಸ್ ಪಕ್ಷಕ್ಕೆ ನಿಷ್ಠವಾಗಿರುವ ಹಿಂದುಸ್ತಾನ್ ಟೈಮ್ಸ್, ‘ಜಪಾನೀಯರು ತಿಳಿಸಿದಂತೆ ಒಂದು ವೇಳೆ ನೇತಾಜಿಯ ಸಾವಿನ ಸುದ್ದಿ ನಿಜವೇ ಆಗಿದ್ದರೆ ಅದರಿಂದ ಕೋಟ್ಯಂತರ ಭಾರತೀಯ ಮನಸುಗಳಿಗೆ ಘಾಸಿಯಾಗುತ್ತದೆ. ಆದರೆ ಅದೇ ವೇಳೆಗೆ ಬ್ರಿಟಿಷ್
ಪ್ರಭುತ್ವಕ್ಕೆದುರಾಗಿದ್ದ ಬಹಳ ದೊಡ್ಡ ಸಂಕಟವೊಂದು ನಿವಾರಣೆಯಾಯ್ತು… ಎಂ
ಅಂದರೆ ಒಂದು ವೇಳೆ ನೇತಾಜಿ ಬದುಕಿದ್ದರೆ ಅದರಿಂದ ಬ್ರಿಟಿಷ್ ಸರ್ಕಾರಕ್ಕೆ ಬಹಳ ದೊಡ್ಡ ವಿಪತ್ತು ಎದುರಾಗುತ್ತಿತ್ತು ಎಂಬುದು ನಿಚ್ಚಳವಾಯ್ತು. ಇದೇ ವೇಳೆಗೆ ಭಾರತದಲ್ಲಿ ನೇತಾಜಿ ಸಾವಿನ ಬಗ್ಗೆ ಜನ ಸಂಶಯ ವ್ಯಕ್ತಪಡಿಸತೊಡಗಿದರು. ಬಹುಶಃ ಜಪಾನೀಯರೇ ನೇತಾಜಿಯವರು ಭೂಗತರಾಗಲು ಸಹಕರಿಸಿರಬಹುದು. ಆ ಮೂಲಕ ಮಿತ್ರರಾಷ್ಟ್ರಗಳ ಮೇಲೆ ಯುದಟಛಿ ಸಾರಿದ ತಪ್ಪಿಗಾಗಿ ದೊರಕುವ ಶಿಕ್ಷೆಯಿಂದ ನೇತಾಜಿಯವರನ್ನು ಪಾರು ಮಾಡಲು ಜಪಾನಿ ಸೈನ್ಯಾಽಕಾರಿಗಳೇ ಈ ಸುಳ್ಳು ಹಬ್ಬಿಸಿರಬಹುದೆಂಬ ಒಂದು ವಾದವೂ ಕೇಳಿಬಂತು. ಇಂಥದು ಸಾಧ್ಯತೆಯನ್ನೂ ತಳ್ಳಿಹಾಕಲು ಸಾಧ್ಯವಿಲ್ಲ. ದಕ್ಷಿಣ ಭಾರತದ ಪ್ರಮುಖ ಇಂಗ್ಲಿಷ್ ದೈನಿಕ ‘ದಿ ಹಿಂದು’ ಈ ಬಗ್ಗೆ ನೇರವಾಗಿ ಬರೆಯಲಿಲ್ಲ. ಬದಲಿಗೆ ಅದು ಲಂಡನ್ನಲ್ಲಿ ವಾಸಿಸುತ್ತಿರುವ ಭಾರತೀಯರು ನೇತಾಜ ಸಾವಿನ ಸುದ್ದಿಯನ್ನು ನಂಬಲಿಲ್ಲ ಅಂತನ್ನೋ ರೀತಿಯ ವರದಿ ಬರೆಯಿತು. ಇದೇ ರೀತಿಯ ವರದಿಯನ್ನು ಹಿಂದುಸ್ತಾನ್ ಟೈಮ್ಸ್ ಕೂಡಾ ಪ್ರಕಟಿಸಿತು. ‘ಬೋಸ್ ಡೆಡ್, ಸ್ಟೋರಿ ನಾಟ್ ಬಿಲೀವ್ಡ್ ಇನ್ ಲಂಡನ್’ ಎಂಬ ಹೆಡ್ಡಿಂಗ್ನ ಈ ವರದಿಯಲ್ಲಿ ಒಂದು ಅತ್ಯಂತ ಮಹತ್ವದ ಸಂಗತಿಯನ್ನು ಉಖಿಸಲಾಗಿತ್ತು. ಅದೇನೆಂದರೆ ಹಿಂದೊಮ್ಮೆ ಸುಭಾಷ್ಶ್ಚಂದ್ರ ಬೋಸ್ರು ಜರ್ಮನಿಯಿಂದ ನಾಪತ್ತೆಯಾದಾಗಲೂ ಜಪಾನ್ ಇದೇ ರೀತಿಯ ಸುದ್ದಿ ಹಬ್ಬಿಸಿತ್ತು. ಆದರೆ ಬಳಿಕ ನೇತಾಜಿ ಟೋಕಿಯೋದಲ್ಲಿ ಪ್ರತ್ಯಕ್ಷವಾಗಿದ್ದರು
ಭಾರತಕ್ಕೆ ಸ್ವಾತಂತ್ರ್ಯ ಬಂದ ಕ್ಷಣದಲ್ಲೂ ಸುಭಾಶರನ್ನು ಕಳೆದುಕೊಂಡ ಸೂತಕ ದೇಶವನ್ನು ಆವರಿಸಿತ್ತು. ಸಾವಿನ ರಹಸ್ಯವನ್ನು ಭೇದಿಸುವಂತೆ ನೆಹರು ಸರ್ಕಾರದ ಮೇಲೆ ಒತ್ತಡ ಬಿತ್ತು. ಹಾಗಾಗಿ ೧೯೫೬ರಲ್ಲಿ ಶಾ ನವಾಝ್ ಸಮಿತಿ ರಚನೆಯಾಯಿತು. ಬೋಸರು ಭಾರತೀಯ ರಾಷ್ಟ್ರೀಯ ಸೇನೆಯನ್ನು ತಂದರೆ ನಾನೇ ಅದರ ವಿರುದಟಛಿ ಖಡ್ಗ ಹಿಡಿದು ಹೋರಾಡುತ್ತೇನೆ ಎಂದಿದ್ದ ನೆಹರು ರಚಿಸಿದ ಸಮಿತಿಯಿಂದ ಏನ ತಾ ನಿರೀಕ್ಷಿಲ ಸಾಧ್ಯ? ವಿಮಾನ ಅಪಘಾತದಲ್ಲಿ ಮಡಿದರು ಎಂದು ಷರಾ ಬರೆಯಿತು ಶಾ ನವಾಝ್ ಸಮಿತಿ. ಆದರೆ ಒತ್ತಡ ನಿಲ್ಲಲಿಲ್ಲ. ಅದಕ್ಕೆ ಮಣಿದ ನೆಹರು ಪುತ್ರ ಇಂದಿರಾ ಗಾಂಽಯವರು ಖೋಸ್ಲಾ ಸಮಿತಿ ರಚಿಸಿ, ಅದರ ಕೈಯಿಂದಲೂ ಮಡಿದರು ಎಂದು ಬರೆಸಿ ಕಣ್ಣೊರೆಸಲು ಯತ್ನಿಸಿದರೂ ಜನ ನಂಬಲಿಲ್ಲ. ಕೊನೆಗೆ ೧೯೯೮, ಏಪ್ರಿಲ್ ೩೦ರಂದು ಕೋಲ್ಕತಾ ಹೈಕೋರ್ಟ್, ವಿವಾದಕ್ಕೆ ಅಂತ್ಯ ಕಾಣಿಸುವಂಥ ಒಂದು ಕೂಲಂಕಷ ಶೋಧನೆ, ಪರಾಮರ್ಶೆ ಮಾಡುವ ಆಯೋಗ ರಚನೆ ಮಾಡಿ ಎಂದು ಆಗಿನ ಬಿಜೆಪಿ ನೇತೃತ್ವದ ಅಟಲ್ ಬಿಹಾರಿ ವಾಜಪೇಯಿ ಸರ್ಕಾರಕ್ಕೆ ಆದೇಶ ನೀಡಿತು. ೧೯೯೯ರಲ್ಲಿ ಅಟಲ್ ಸರ್ಕಾರ ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಮನೋಜ್ ಮುಖರ್ಜಿಯವರ ಸಮಿತಿ ರಚನೆ ಮಾಡಿತು. ಅದು ೨೦೦೬ರಲ್ಲಿ ತನ್ನ ವರದಿ ನೀಡಿತು, ಆದರೆ ಅಷ್ಟರೊಳಗೆ ಅಧಿಕಾರಕ್ಕೆ ಬಂದಿದ್ದ ಕಾಂಗ್ರೆಸ್ ಸರ್ಕಾರ ವರದಿಯನ್ನೇ ತಿರಸ್ಕಾರ ಮಾಡಿಬಿಟ್ಟಿತು! ಏಕೆ ಗೊತ್ತಾ? ಶಾ ನವಾಝ್, ಖೋಸ್ಲಾ ಸಮಿತಿಗಳಂತೆ ನೆಹರು ಕುಟುಂಬಕ್ಕೆ ‘ಬೇಕಾದ’ ವರದಿ
(ಕಾಗದಪತ್ರ, ದಾಖಲೆ) ಸುಭಾಷ್ ಸಾವಿನ ರಹಸ್ಯವನ್ನು ಭೇದಿಸುವ ಸುಳಿವು ಸಿಕ್ಕೀತೇ? ಆ ಸುಳಿವು, i am beyond love and hate .i am beyond anger ,violence ಎನ್ನುತ್ತಿದ್ದ ಮಹಾನ್ ನಾಯಕರೊಬ್ಬರ ಶಿಷ್ಯೋತ್ತಮನ ನಿಜರೂಪವನ್ನು ಬಯಲಿಗೆಳೆದೀತೆ?